ಆನಂದ ಪಡೆಯುವುದೇ ಎಲ್ಲರ ಜೀವನದ ಉದ್ದೇಶ. ಆದರೆ ಆನಂದವನ್ನು ಪಡೆಯಲು ಮಾದಕ
ಪದಾರ್ಥಗಳ ಮೊರೆ ಹೋದರೆ ಜೀವನವೇ ನಾಶವಾದಂತೆ ಎಂಬುದಾಗಿ ಬ್ರಹ್ಮಕುಮಾರಿಸ್ ಮಣಿಪಾಲ ಪಟಕದ ಧ್ಯಾನ ಶಿಕ್ಷಕಿ ಬಿ.ಕೆ.ಸೌರಭ ತಿಳಿಸಿದರು. ಮಾದಕ ಪೆದಾರ್ಥ ಸೇವನೆಯನ್ನು ಯಾವುದೇ ಕಾರಣಕ್ಕಾಗಿ ಆರಂಬಿಸಿದರೂ ಕ್ರಮೇಣ ಅದು ಒಂದು ಚಟವಾಗಿ ಬೆಳೆದು ಅದರ ಸೇವನೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಾ ಹೋಗಿ ಆ ವ್ಯಕ್ತಿಯ ಜೀವನವನ್ನೆ ಸರ್ವನಾಶ ಮಾಡುತ್ತದೆ ಹಾಗಾಗಿ ಧ್ಯಾನ ಹಾಗೂ ಇನ್ನಿತರ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ಪಾರಾಗಬೇಕು ಎಂಬುದಾಗಿ ಅವರು ತಿಳಿಸಿದರು.
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮಾನ್ಯ ಪ್ರಧಾನ ಮಂತ್ರಿಗಳ ‘ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ’ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಬಗೆಗಿನ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಭಾಗವಹಿಸಿದ್ದರು.
ಮದ್ಯ ಹಾಗೂ ಮಾದಕ ದ್ರವ್ಯ ವ್ಯಸನಿಗಳಾಗದಂತೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದ ಅವರು ಸ್ವದೇಶಿ ವಸ್ತುಗಳನ್ನು ಮಾತ್ರ ಉಪಯೋಗಿಸುವೆವೆಂಬುದಾಗಿಯೂ ಸಹ ವಿದ್ಯಾರ್ಥಿಗಳಿಂದ ಪ್ರತಿಜ್ಞೆಯನ್ನು ಮಾಡಿಸಿದರು. ಉಡುಪಿಯ ಖ್ಯಾತ ಜಾದೂಗಾರರಾದ ಪ್ರೊಫೆಸರ್ ಶಂಕರ್ ಕಾರ್ಯಕ್ರಮದಲ್ಲಿ ಹಾಜರಿದ್ದು ಜಾದೂ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯಗಳ ದುಪ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು, ರಾಷ್ಟಿçÃಯ ಸೇವಾಯೋಜನಾಧಿಕಾರಿ ಶ್ರೀ ರಾಜೇಶ್ ಕುಮಾರ್ ಉಪಸ್ಥಿತರಿದ್ದರು. ಸಹಯೋಜನಾಧಿಕಾರಿಗಳಾದ ಶ್ರೀ ಚಂದ್ರಶೇಖರ್ ಸ್ವಾಗತಿಸಿ, ಕುಮಾರಿ ಸನ್ನಿಧಿ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವನ್ನಿತ್ತರು.